ಆತ್ಮೀಯ ಬಂಧು, ನಮಸ್ಕಾರ, ವಿ.ಆರ್.ಭಟ್ ತಮಗೆ ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತಿದ್ದೇನೆ

Tuesday, July 12, 2011

ಬೇಕು ಮುಂಗಡ !


ಬೇಕು ಮುಂಗಡ !

ಜೀವ ಜಡದ ಹೃದಯವನ್ನು ಒಮ್ಮೆ ಸಾರಿಸಿ
ದೇವ ದೇಹದೊಳಗೆ ನಿನ್ನ ಕರೆದು ಕೂರಿಸಿ |
ಭಾವಮಿಳಿತ ಮನಸದೆಂಬ ಹೂವ ಏರಿಸಿ
ಜಾವಜಾವಕೊಮ್ಮೆ ಪೂಜೆ ಭಕುತಿ ಪೇರಿಸಿ ||

ರಾಮ ಕೃಷ್ಣ ಬುದ್ಧ ಕಲ್ಕಿ ಹಲವು ರೂಪದಿ
ನೇಮ ನಡೆಸಿ ಮೆರೆವೆ ಹರಿಯೇ ಜಗದ ಕೂಪದಿ |
ನಾಮ ನೆನೆಯಲೆಮಗೆ ಸಮಯವಿರದು ತಾಪದಿ !
ಹೇಮ ಗಿರಿಗಳವನು ಬಯಸಿ ಆಡೆ ಚೌಪದಿ !!

ಬಲಿಗೆ ಒಲಿದೆ ದಾನ ಪಡೆದು ಹಿಂದೆ ಭುವಿಯಲಿ
ಕಲಿಯನೊಲಿದು ತಂದು ಜಡಿದೆ ಭವಕೆ ಕಹಿಯಲಿ !
ಸುಲಿಗೆ ಮೋಸ ಚೋರತನಗಳಧಿಕ ದಿನದಲಿ
ಒಲವು ಪ್ರೀತಿ ನಲುಗಿನಿಂತು ನೋಡುತಿರುವಲಿ ||

ಧರ್ಮ ಜಾತಿ ಮತಗಳೆಂಬನೇಕ ಪಂಗಡ
ಕರ್ಮವೆಮಗೆ ಸಾಗಬೇಕು ಅದರ ಸಂಗಡ |
ಮರ್ಮವರಿಯದಾದೆವಯ್ಯ ತತ್ವ ಹಿಂಗಡ
ಶರ್ಮ ಶೇಖ ಪೌಲಿಗೆಲ್ಲ ಬೇಕು ಮುಂಗಡ !

3 comments:

  1. ಸುಲಲಿತವಾದ, ಸುಂದರ ಕವನ!

    ReplyDelete
  2. ಕವನ ಕೆಲವರಿಗೆ ಕೇವಲ ಭಕ್ತಿಗೀತೆಯಾಗಿ ಕಾಣಿಸಿರಲೂ ಸಾಕು, ಓದಿದ, ಪ್ರತಿಕ್ರಿಯಿಸಿದ ಸುಧೀಂಧ್ರರೇ ತಮಗೂ ಹಾಗೂ ಓದಿದ ಮಿಕ್ಕುಳಿದವರಿಗೂ ಕೃತಜ್ಞನಾಗಿದ್ದೇನೆ.

    ReplyDelete
  3. ಕವನ ತುಂಬಾ ಚೆನ್ನಾಗಿದೆ.

    ReplyDelete