![](https://blogger.googleusercontent.com/img/b/R29vZ2xl/AVvXsEj-0_WhT4JjirVnOeps6Fh6Fzc7-ylAaPzrOsOYE0P3z5L706ZkUkjEdliE9or6V3JvtZYN9JqI1Ac7ORRaQRmqhtXUZxDnum7n6dRjO9gH5Ra3kXszY3vBuwcTNCbnGU8F_7YIIdcOXD8/s320/Across_the_universe.jpg)
ವಸುಧೈವ ಕುಟುಂಬಕಮ್
ಹೃದಯವರಿತಮೇಲೆ ನಮ್ಮ ನಿಮ್ಮ ನಡುವೆ ಭೇದವೇ?
ಅದುವೆ ಮಂತ್ರವಾಗಲೊಮ್ಮೆ ಜಗದ ತುಂಬಾ ನಾದವೇ
ಒಂದೇ ತಾಯ ಹೊಟ್ಟೆಯಲ್ಲಿ ಹುಟ್ಟಿ ಬೆಳೆದ ಮರಿಗಳು
ತಿಂದು ಬೆಳೆದು ತಿಳಿಯದಾಗ ಜಗಳಮಾಳ್ಪ ಕುರಿಗಳು !
ಗರುವದಿಂದ ಹರಿದು ದೇಶ ಕೋಶ ರಾಜ್ಯಂಗಳ
ಮೆರೆದರೆಲ್ಲ ಮಣ್ಣಾದರು ಕರಗುತ ವ್ಯಾಜ್ಯಂಗಳ
ನಡೆವ ನಡತೆ ನುಡಿವ ನುಡಿಯು ಉತ್ತಮವಿರೆ ಯೋಗವ
ಒಡವೆ ವಸ್ತ್ರ ಕಡೆಗೆ ಕೀರ್ತಿ ಪಡೆವರೆಲ್ಲ ಭೋಗವ
ಹುಂಡು ಹೆಚ್ಚು-ಕಮ್ಮಿ ಇರಲು ಸಹಿಸಿ ನಡೆಯೆ ಮಾನವ
ತಂಡ ಕಟ್ಟಿ ಭುಜವ ತಟ್ಟಿ ಹೋರಲಾತ ದಾನವ
ಮುಂದೆ ನಮ್ಮ ಅಂತ್ಯವೆಂತೋ ಯಾರು ಅದನು ಬಲ್ಲರು ?
ಇಂದು ಇರುವ ಜಾಗದಲ್ಲಿ ಸುಖದಿ ಬದುಕಲೆಲ್ಲರು